(ನ್ಯೂಸ್ ಕಡಬ) newskadaba.com ಕಲಬುರಗಿ, ಆ.05. ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ವಿರುದ್ಧ ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮನ್ವಯ ಸಮಿತಿ (KPMTCC) ಸಿಎಂ ಸಿದ್ದರಾಮಯ್ಯ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದೆ.

ಇಲಾಖೆ ಅಧಿಕಾರಿಗಳು ಬೇರೆ ಬೇರೆ ಆಧಾರದಲ್ಲಿ ಶಾಲೆಗಳಿಂದ ಹಣ ವಸೂಲಿ ಮಾಡುತ್ತಿದ್ದು, ನಾನಾ ಕಡೆಗಳಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.













