ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ನುಗ್ಗಿದ ಅಪರಚಿತ ವ್ಯಕ್ತಿ

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.06. ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ಅಪರಚಿತ ವ್ಯಕ್ತಿಯೋರ್ವ ನುಗ್ಗಿದ ಘಟನೆ ವರದಿಯಾಗಿದೆ. ಕಾವಲುಗಾರ ನನ್ನು ಕಂಡು ಈತ ಪರಾರಿಯಾಗಿದ್ದಾನೆ.

ನ್ಯಾಯಾಲಯ ಕಟ್ಟಡದೊಳಗೆ ನುಗ್ಗಿದ ಈತ ಜಿಲ್ಲಾ ನ್ಯಾಯಾಧೀಶ ರವರ ಕಚೇರಿ ತನಕ ತೆರಳಿದ್ದು , ಈತನ ಬಳಿ ಕಬ್ಬಿಣದ ರಾಡ್ ಕಂಡು ಬಂದಿದೆ. ಈತ ಕಳವಿಗಾಗಿ ಬಂದಿದ್ದನೇ ಅಥವಾ ಕಡತಗಳನ್ನು ಕೊಂಡೊಯ್ಯುವ ಉದ್ದೇಶದಿಂದ ಒಳನುಗ್ಗಿದ್ದನೇ ಎಂಬ ಬಗ್ಗೆ ಸ್ಪಷ್ಟ ಗೊಂಡಿಲ್ಲ. ವಿದ್ಯಾನಗರ ಠಾಣಾ ಪೊಲೀಸರು ಸ್ಥಳಕ್ಕಾಮಿಸಿ ತನಿಖೆ ಆರಂಭಿಸಿದ್ದಾರೆ.

Also Read  ನಗರದಲ್ಲಿ ಮತ್ತೊಂದು 'ಉರ್ದುವಿನಲ್ಲಿ ಕಾಣಿಸಿಕೊಂಡ ಉಗ್ರ' ಬರಹ

 

error: Content is protected !!
Scroll to Top