ಬೆಳ್ತಂಗಡಿ: ಕುಟುಂಬ ಸಮೇತರಾಗಿ ಶ್ರೀ ಸದಾಶಿವ ದೇವಸ್ಥಾನಕ್ಕೆ ರಾಕಿಂಗ್‌ ಸ್ಟಾರ್‌ ಯಶ್‌ ಭೇಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.06. ಮಣ್ಣಿನ ಹರಕೆಯ ಕ್ಷೇತ್ರವೆಂದೇ ಪ್ರಸಿದ್ದವಾದ ಸುರ್ಯ ಶ್ರೀ ಸದಾಶಿವ ದೇವಸ್ಥಾನಕ್ಕೆ ರಾಕಿಂಗ್‌ ಸ್ಟಾರ್‌ ಯಶ್‌ ಅವರು ಕುಟುಂಬ ಸಮೇತ ಭೇಟಿ ನೀಡಿದ್ದಾರೆ.

ಪತ್ನಿ ರಾಧಿಕಾ ಪಂಡಿತ್ ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆ ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ತಮ್ಮ ಹರಕೆ ತೀರಿಸಲು ದಂಪತಿ ಬಂದಿದ್ದರು ಎನ್ನಲಾಗಿದೆ.ಇದೇ ವೇಳೆ ಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಯಶ್ ದಂಪತಿಗೆ ಸಾಥ್ ನೀಡಿದ್ದಾರೆ. ಸುರ್ಯ ದೇವಸ್ಥಾನದಿಂದ ಅವರು ಧರ್ಮಸ್ಥಳಕ್ಕೆ ತೆರಳಿದ್ದಾರೆ.

Also Read  ಬಾಲ್ಯ ವಿವಾಹಕ್ಕೆ ಅವಕಾಶ ನೀಡಿದರೆ ಕಠಿಣ ಕ್ರಮ ➤ ಜಿಲ್ಲಾಧಿಕಾರಿ ಎಚ್ಚರಿಕೆ

error: Content is protected !!
Scroll to Top