‘ಭಂಡ ಕಾಂಗ್ರೆಸ್ ಸರಕಾರದಿಂದ ನಾಡಿನ ಜನತೆಗೆ ಒಳ್ಳೆಯದಾಗಲು ಸಾಧ್ಯವಿಲ್ಲ        ಶಾಸಕ ವಿಜಯೇಂದ್ರ                       

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.08. ಅಹಿಂದ ಹೆಸರು ಹೇಳಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಹಲವು ಭ್ರಷ್ಟಾಚಾರ ಹಗರಣಗಳಲ್ಲಿ ಸಿಲುಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದರು.

ಐದನೇ ದಿನವಾದ ಇಂದು ಮೈಸೂರು ಚಲೋ ಪಾದಯಾತ್ರೆಯು ಮುಂದುವರೆಯಿತು. ಈ ಸಂದರ್ಭದಲ್ಲಿ ಮಂಡ್ಯದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ವಾಲ್ಮೀಕಿ ನಿಗಮದ ಹಗರಣ, ಮೈಸೂರಿನ ಸಾವಿರಾರು ಕೋಟಿಯ ಮೂಡ ನಿವೇಶನ ಹಗರಣ ಇರಬಹುದು; ಇಂಥ ಭ್ರಷ್ಟ, ದುಷ್ಟ ಕಾಂಗ್ರೆಸ್ ಸರಕಾರ, ಇಂಥ ಭ್ರಷ್ಟ ಮುಖ್ಯಮಂತ್ರಿಗಳಿಂದ ನಾಡಿನ ಜನತೆಗೆ ನ್ಯಾಯ ಕೊಡಲು ಸಾಧ್ಯವೇ ಎಂದು ಅವರು ಕೇಳಿದರು.

 

error: Content is protected !!

Join the Group

Join WhatsApp Group