ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ವಿದ್ಯಾರ್ಥಿ….!

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಆ. 13. ತರಗತಿಗೆ ನುಗ್ಗಿ ವಿದ್ಯಾರ್ಥಿಯೋರ್ವ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದಿರುವ ಘಟನೆ ಮೂಡಬಿದಿರೆಯ ಕಾಲೇಜಿನಲ್ಲಿ ನಡೆದಿದೆ.

 

ಚೂರಿ ಇರಿತಕ್ಕೊಳಗಾದ ವಿದ್ಯಾರ್ಥಿನಿ ಹಾಗೂ ಆರೋಪಿ ತುಮಕೂರು ಮೂಲದ ಮಂಜುನಾಥ್ ಜೊತೆಯಾಗಿ ಪಿಯುಸಿವರೆಗೆ ವಿದ್ಯಾಭ್ಯಾಸ ಪಡೆದಿದ್ದು ಇವರಿಬ್ಬರ ನಡುವೆ ಪ್ರೇಮಾಂಕುರವಾಗಿತ್ತು ಎನ್ನಲಾಗಿದೆ. ಬಳಿಕ ಯುವಕ ಕಾಲೇಜು ತೊರೆದಿದ್ದು, ಹುಡುಗಿ ಕಾಲೇಜು ಸೇರ್ಪಡೆಯಾಗಿದ್ದಳು. ಆದರೆ, ಈ ವಿಚಾರ ಮನೆಯವರಿಗೆ ಗೊತ್ತಾಗಿ ವಿದ್ಯಾರ್ಥಿನಿಯ ಬಳಿಯಿದ್ದ ಮೊಬೈಲ್ ನ್ನು ವಾಪಸ್ ಪಡೆದಿದ್ದರು. ಇದರಿಂದ ಆರೋಪಿಗೆ ಆಕೆಯ ಜೊತೆ ಮಾತನಾಡಲು ಆಗದೇ ಇದ್ದು, ಕುಪಿತನಾದ ಆತ ಮೂಡುಬಿದಿರೆಗೆ ಆಗಮಿಸಿ ಲಾಡ್ಜ್ ನಲ್ಲಿ ತಂಗಿದ್ದನು. ಸೋಮವಾರದಂದು ಬೆಳಗ್ಗೆ ಕಾಲೇಜಿಗೆ ತೆರಳಿ ಹುಡುಗಿ ಇದ್ದ ತರಗತಿಗೆ ನುಗ್ಗಿ ಕತ್ತರಿಯಲ್ಲಿ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಕೂಡಲೇ ಅಲ್ಲಿದ್ದ ಇತರೆ ವಿದ್ಯಾರ್ಥಿಗಳು ಆತನನ್ನು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದು, ಆರೋಪಿ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

error: Content is protected !!

Join the Group

Join WhatsApp Group