ಮುಡಾ ಕೇಸ್- ಯಾವುದೇ ಕ್ಷಣದಲ್ಲಿ ಸಿಎಂ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 17. ಮುಡಾ ಕೇಸ್ ಗೆ ಸಂಬಂಧಿಸಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರಿಂದ ಯಾವುದೇ ಕ್ಷಣದಲ್ಲೂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ.

ದೂರುದಾರರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್ ಅವರು ನೀಡಿರುವ ದೂರಿನ ಅನುಸಾರ ಲೋಕಾಯುಕ್ತ ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವ ಸಂಭವವಿದೆ. ರಾಜ್ಯಪಾಲರು ನಿರ್ದಿಷ್ಟ ತನಿಖಾ ಸಂಸ್ಥೆಯಿಂದ ತನಿಖೆ ನಡೆಸುವ ಬಗ್ಗೆ ತಮ ನೋಟೀಸ್ನಲ್ಲಿ ಉಲ್ಲೇಖ ಮಾಡಿಲ್ಲವಾದರೂ ದೂರುದಾರರು ಈಗಾಗಲೇ ಲೋಕಾಯುಕ್ತ ನ್ಯಾಯಾಲಯಕ್ಕೆ ದೂರು ಕೊಟ್ಟಿದ್ದಾರೆ.

 

Scroll to Top