(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 20. ಸುಮಾರು ಗಾಂಜಾ ಸಹಿತ ಆರೋಪಿಯೋರ್ವನನ್ನು ರೈಲ್ವೇ ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಬಂಧಿತನನ್ನು ಪೈವಳಿಕೆ ಬಾಯಿಕಟ್ಟೆ ಮಂಜತ್ತೊಡಿಯ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಈತನಿಂದ ಸುಮಾರು 5.970 ಕಿ.ಲೋ. ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯು ರವಿವಾರದಂದು ರಾತ್ರಿ ಕಾಸರಗೋಡು ರೈಲ್ವೆ ನಿಲ್ದಾಣದ ಒಂದನೇ ಫ್ಲಾಟ್ ಫಾರ್ಮ್ ನಲ್ಲಿ ನಿಂತುಕೊಂಡಿದ್ದ ಸಂದರ್ಭ ಈತನನ್ನು ಪೊಲೀಸರು ವಿಚಾರಿಸಿದಾಗ ಸಂಶಯಾಸ್ಪದವಾಗಿ ಉತ್ತರ ನೀಡಿದ್ದಾನೆ ಎನ್ನಲಾಗಿದೆ. ಬಳಿಕ ಈತನ ಬಳಿ ಇದ್ದ ಪ್ಲಾಸ್ಟಿಕ್ ಕವರನ್ನು ಪರಿಶೀಲಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.








