ಮಣಿಪಾಲ: ಡಾ. ವಸುಂಧರಾ ದೊರೆಸ್ವಾಮಿಯವರ ‘ಕಿತ್ತೂರು ರಾಣಿ ಚೆನ್ನಮ್ಮ’ ಏಕವ್ಯಕ್ತಿ ನೃತ್ಯನಾಟಕ ಪ್ರದರ್ಶನ

(ನ್ಯೂಸ್ ಕಡಬ) newskadaba.c0m ಮಣಿಪಾಲ, ಆ. 22.  ಮಣಿಪಾಲ ವಿಶ್ವವಿದ್ಯಾನಿಲಯದ ಸಾಂಸ್ಕೃತಿಕ ವಿಭಾಗವು ಸಂಜೆ 6.30ಕ್ಕೆ ಸರಿಯಾಗಿ ಟಿ.ಎಂ.ಎ ಪೈ ಸಭಾಂಗಣದಲ್ಲಿ ಹಿರಿಯ ನೃತ್ಯಕಲಾವಿದೆ, ಗುರು ಡಾ. ವಸುಂಧರಾ ದೊರೆಸ್ವಾಮಿಯವರ ‘ಕಿತ್ತೂರು ರಾಣಿ ಚೆನ್ನಮ್ಮ’ ಎಂಬ ಏಕವ್ಯಕ್ತಿ ನೃತ್ಯನಾಟಕ ಪ್ರದರ್ಶನವನ್ನು ವಿದ್ಯಾರ್ಥಿಗಳಿಗೆ ಹಾಗೂ ಊರಿನ ಕಲಾಸಕ್ತರಿಗಾಗಿ ಆಯೋಜಿಸಿದೆ.

ಪ್ರೊ. ಜ್ಯೋತಿ ಶಂಕರ್ ಅವರು ರಚಿಸಿ, ವಿದ್ವಾನ್ ಡಿ.ಎಸ್ ಶ್ರೀವತ್ಸ ಅವರ ಸಂಗೀತ ಸಂಯೋಜನೆಯ ಈ ನೃತ್ಯನಾಟಕದಲ್ಲಿ ಡಾ.ವಸುಂಧರಾ ಅವರ ನೃತ್ಯ-ನಾಟಕ-ಸಮರಕಲೆಗಳ ಸಿದ್ಧಿಯ ಸಮನ್ವಯವನ್ನು ಪ್ರದರ್ಶನ ಮಾಡಲಿದ್ದಾರೆ.

 

Scroll to Top