KSRTC ಬಸ್ ಟಿಕೆಟ್ ದರ ಏರಿಕೆ ಸುಳಿವು- ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

(ನ್ಯೂಸ್ ಕಡಬ) newskadaba.c0mಬೆಂಗಳೂರು, ಆ. 24.  ನೀರಿನ ಬಿಲ್ ಏರಿಕೆ ಮಾಡುವುದಾಗಿ ಶಾಕ್ ನೀಡಿದ್ದ ರಾಜ್ಯ ಸರ್ಕಾರ, ಜನತೆ ಸುಧಾರಿಸಿಕೊಳ್ಳುವ ಮೊದಲೇ ಇದೀಗ ಮತ್ತೊಂದು ಶಾಕ್ ನೀಡಿದೆ. ಕೆಎಸ್ಆರ್ ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ನೀಡಿದ್ದಾರೆ.

ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (KERC) ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆ ನಿರ್ಧಾರಗಳನ್ನು ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ಆಯೋಗ (KTRC) ರಚನೆಗೆ ಸರ್ಕಾರ ಮುಂದಾಗಿದೆ ಎಂಬ ಪತ್ರಿಕೆಯ ವರದಿ ಕುರಿತು ವಿಧಾನಸಭೆ ವಿರೋಧ ಪಕ್ಷದ ನಾಯಕರ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದರು ಎನ್ನಲಾಗಿದೆ.

 

Scroll to Top