ಈಜಲು ಹೋದ ವಿದ್ಯಾರ್ಥಿ ಕೆರೆ ನೀರಿನಲ್ಲಿ ಮುಳುಗಿ ಮೃತ್ಯು..!

Death, deadbody, Waterfall

(ನ್ಯೂಸ್ ಕಡಬ) newskadaba.com ಉಡುಪಿ, ಆ. 26. ಈಜಲೆಂದು ಕೆರೆಗೆ ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಉಡುಪಿಯ ಕರಂಬಳಿ ಎಂಬಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಮೃತ ಸಿದ್ದಾರ್ಥ್ ಮತ್ತಿಬ್ಬರೊಂದಿಗೆ ಕರಂಬಳಿ ಕೆರೆಗೆ ಈಜಲೆಂದು ತೆರಳಿದ್ದ. ಆದರೆ ಸಿದ್ದಾರ್ಥ್ ಮಾತ್ರ ನೀರಿಗಿಳಿದಿದ್ದು, ಇನ್ನಿಬ್ಬರು ನೀರಿಗೆ ಇಳಿದಿರಲಿಲ್ಲ ಎನ್ನಲಾಗಿದೆ. ಸ್ಥಳೀಯರು ಕೂಡಲೇ ಆತನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

error: Content is protected !!

Join the Group

Join WhatsApp Group