ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಹಾಸನ, ಆ. 28. ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬೇಲೂರು ತಾಲ್ಲೂಕಿನ, ಜೆ.ಸುರಪುರ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮಲ್ಲಿಕಾರ್ಜುನ (58) ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನರವರು ಆ. 13 ರಂದು ಬೈಕಿನಲ್ಲಿ ಜಮೀನಿಗೆ ತೆರಳುತ್ತಿದ್ದ ವೇಳೆ ಕಾಡಾನೆಯೊಂದು ಅವರ ಮೇಲೆ ದಾಳಿ ಮಾಡಿ ಸೊಂಡಿಲಿನಿಂದ ಎಸೆದು, ತುಳಿದು ಗಾಯಗೊಳಿಸಿತ್ತು. ಇದರಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಲ್ಲಿಕಾರ್ಜುನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Also Read  ಕಾರ್ ಸ್ಟ್ರೀಟ್ ಸರಕಾರಿ ಕಾಲೇಜಿನಲ್ಲಿ "ಬಿಸಿನೆಸ್ ಲ್ಯಾಬ್" ಶೀಘ್ರ ಆರಂಭ

error: Content is protected !!
Scroll to Top