ಕಡಬ: ದ್ವಿಚಕ್ರ ವಾಹನಗಳ ಢಿಕ್ಕಿ- ಸವಾರರಿಗೆ ಗಾಯ

Accident

(ನ್ಯೂಸ್ ಕಡಬ) newskadaba.com ಕಡಬ, ಸೆ. 19. ಸ್ಕೂಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಕುಂತೂರು ಚರ್ಚ್ ಬಳಿ ನಡೆದಿದೆ.

ಕುಂತೂರು ಕೆಮ್ಮಣ್ಣು ನಿವಾಸಿ ಶಶಿಧರ ಎಂಬವರು ಆಲಂಕಾರಿನಿಂದ ಕುಂತೂರಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಎದುರುಗಡೆ ಹೋಗುತ್ತಿದ್ದ ಉಮೇಶ ಎಂಬವರು ತನ್ನ ಬೈಕನ್ನು ಯಾವುದೇ ಮುನ್ಸೂಚನೆ ನೀಡದೇ ಒಮ್ಮಲೇ ಬಲಭಾಗಕ್ಕೆ ತಿರುಗಿಸಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಬೈಕ್ ಗೆ ಢಿಕ್ಕಿಯಾಗಿ ಸವಾರ ಸಹಿತ ರಸ್ತೆಗೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಇಬ್ಬರು ಬೈಕ್ ಸವಾರರೂ ಗಾಯಗೊಂಡಿದ್ದಾರೆ. ಈ ಬಗ್ಗೆ ಶಶಿಧರ ಅವರ ಸಹೋದರ ಆನಂದ ಎಂಬವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

error: Content is protected !!

Join WhatsApp Group

WhatsApp Share