ಸೆ. 21ರಿಂದ ಕಿರಿಯ ವೈದ್ಯರಿಂದ ತುರ್ತು ಸೇವೆ ಆರಂಭಿಸಲು ನಿರ್ಧಾರ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಸೆ. 20. ಕೋಲ್ಕತ್ತಾದ ಆರ್‌ಜಿ ಕರ್ ಮೆಡಿಕಲ್ ಕಾಲೇಜಿನ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಕಳೆದ 41 ದಿನಗಳಿಂದ ಕಿರಿಯ ವೈದ್ಯರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಕೊಂಚ ಸಡಿಲಿಕೆ ಮಾಡಿ ನಾಳೆಯಿಂದ(ಸೆ. 21) ತುರ್ತು ಸೇವೆಗಳನ್ನು ಪುನರಾರಂಭಿಸಲು ನಿರ್ಧರಿಸಿರುವುದಾಗಿ ತಿಳಿದುಬಂದಿದೆ.


ಈ ಕುರಿತು ಹೇಳಿಕೆ ನೀಡಿರುವ ಕಿರಿಯ ವೈದ್ಯರು, ಇಂದು ಮಧ್ಯಾಹ್ನ 3 ಗಂಟೆಗೆ ಸಿಬಿಐ ಕಚೇರಿಯವರೆಗೆ ರ‍್ಯಾಲಿ ನಡೆಸಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಶೀಘ್ರ ನಡೆಸಬೇಕು ಎಂದು ಆಗ್ರಹಿಸುತ್ತೇವೆ ಜೊತೆಗೆ ನಾಳೆಯಿಂದ (ಸೆ. 21) ತುರ್ತು ಸೇವೆಗೆ ಪುನರಾರಂಭಿಸಲಾಗುವುದು ಎಂದು ಹೇಳಿದ್ದಾರೆ. ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದ ಪ್ರವಾಹ ಸಂಭವಿಸಿದ್ದು ಹಲವಾರು ಮಂದಿ ಸಂಕಷ್ಟಕ್ಕೀಡಾಗಿದ್ದಾರೆ. ರೋಗಿಗಳಿಗೆ ತುರ್ತು ಚಿಕಿತ್ಸೆಯ ಅವಶ್ಯಕತೆ ಇದ್ದು, ಹಾಗಾಗಿ ಸೇವೆ ಪುನರಾರಂಭಗೊಳಿಸಲಾಗುವುದು ಎಂದು ಹೇಳಿದ್ದಾರೆ.

error: Content is protected !!

Join WhatsApp Group

WhatsApp Share