ಅನೈತಿಕ ಪೊಲೀಸ್ ಗಿರಿ ಪ್ರಕರಣ – ಬಂಧಿತ ಇಬ್ಬರಿಗೆ ನ್ಯಾಯಾಂಗ ಬಂಧನ..!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ಇಲ್ಲಿನ ಪೈಚಾರಿನಿಂದ ಕರೆತಂದು ಸುಳ್ಯ ಬಸ್ಸು ನಿಲ್ದಾಣದ ಬಳಿಯಲ್ಲಿ ಮುಸ್ಲಿಂ ಯುವಕನ ಮೇಲೆ ನಡೆದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೋಲೀಸರು ಇಬ್ಬರನ್ನು ಬಂಧಿಸಿರುವ ಕುರಿತು ವರದಿಯಾಗಿದೆ.

ಬಂಧಿತರನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರಾದ ವರ್ಷಿತ್ ಹಾಗೂ ಮಿಥುನ್ ಎಂದು ತಿಳಿದುಬಂದಿದೆ. ಸದ್ಯ ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಅವರಿಗೆ 14 ದಿನಗಳವರೆಗೆ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ತಿಳಿದು ಬಂದಿದೆ.

error: Content is protected !!

Join the Group

Join WhatsApp Group