ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ- ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಸೆ. 24. ಸ್ಕೂಟರ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಗೂನಡ್ಕ ಬೈಲೆ ಸಮೀಪದ ಶಿರಾಡಿ ದ್ವಾರದ ಬಳಿ ನಡೆದಿದೆ.


ಗಾಯಗೊಂಡ ಸವಾರನನ್ನು ಕಾಸರಗೋಡು ಮೂಲದ ಜುನೈದ್ ಎಂದು ಗುರುತಿಸಲಾಗಿದೆ. ಕಾಸರಗೋಡಿನಿಂದ ಎಮ್ಮೆಮಾಡಿಗೆ ತೆರಳಿ ವಾಪಾಸು ಬರುತ್ತಿದ್ದ ಸ್ಕೂಟರ್ ಹಾಗೂ ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದೆನ್ನಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಸ್ಕೂಟರ್ ಸವಾರನನ್ನ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top