ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತ್ಯು..!

Death, deadbody, Waterfall

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 25. ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಗಳನ್ನು ನಾಗೇಂದ್ರ (13) ಹಾಗೂ ಮೊಹಮದ್ ಶಫಾನ್ (13) ಎಂದು ಗುರುತಿಸಲಾಗಿದೆ. ಬೈಂದೂರು ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ನಾಗೇಂದ್ರ ಹಾಗೂ ಶಫಾನ್ ಮಧ್ಯಾಹ್ನ ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದರು. ಇಬ್ಬರಿಗೂ ಸರಿಯಾಗಿ ಈಜು ಬಾರದ ಪರಿಣಾಮ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಒಲಿಂಪಿಕ್ಸ್ ನಲ್ಲಿ ಕಂಚು ಗೆದ್ದು ಇತಿಹಾಸ ಬರೆದ ಅಮನ್ ಸೆಹ್ರಾವತ್..!

 

error: Content is protected !!
Scroll to Top