ಸಾರಿಗೆ ನೌಕರರ ಬೇಡಿಕೆ ಸರ್ಕಾರ ಈಡೇರಿಸದಿದ್ದಲ್ಲಿ ಮುಷ್ಕರಕ್ಕೆ ಸಿದ್ಧರಾಗುವಂತೆ ಸಾರಿಗೆ ಮುಖಂಡ ಕರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 25. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಸೇರಿದಂತೆ, ಒಟ್ಟು ಆರು ಸಾರಿಗೆ ಸಂಘಟನೆಗಳು ಜತೆಗೂಡಿ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಂಡಿವೆ ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ಸಾರಿಗೆ ಮುಷ್ಕರಕ್ಕೆ ಸಿದ್ಧರಾಗಲು ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ಕರೆ ನೀಡಿದ್ದಾರೆ.

ರಾಜ್ಯ ಸರ್ಕಾರಕ್ಕೆ ಈ ತಿಂಗಳ 26 ರ ವರೆಗೆ ಗಡುವು ನೀಡಲಾಗಿದೆ. ಈ ತಿಂಗಳ 26 ರೊಳಗೆ ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ, 27 ರಂದು ಸಭೆ ನಡೆಸಿ ಮುಷ್ಕರದ ದಿನಾಂಕ ಘೋಷಣೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

error: Content is protected !!

Join the Group

Join WhatsApp Group