ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 26. ಇತಿಹಾಸ ಪ್ರಸಿದ್ದ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಹೆಸರಾಂತ ಸಂಶೋಧಕ, ಸಾಹಿತಿ ಪ್ರೊ.ಹಂ.ಪ. ನಾಗರಾಜಯ್ಯ ಅವರನ್ನು ಮೈಸೂರು ಜಿಲ್ಲಾಡಳಿತದ ವತಿಯಿಂದ ಬೆಂಗಳೂರಿನ ಕ್ರಸೆಂಟ್ ರಸ್ತೆಯಲ್ಲಿರುವ ಅಮೆರಿಕನ್ ಕಾಲನಿಯಲ್ಲಿರುವ ಅವರ ನಿವಾಸಕ್ಕೆ ತೆರಳಿ ಮೈಸೂರು ಪೇಟ ತೋಡಿಸಿ, ಫಲಪುಷ್ಪ ನೀಡಿ ಆಮಂತ್ರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ.ರೂಪಾ ಮತ್ತು ಸ್ವಾಗತ ಸಮಿತಿಯ ಎಲ್ಲ ಅಧಿಕಾರಿಗಳು ಇದ್ದರು.

error: Content is protected !!

Join the Group

Join WhatsApp Group