ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ-2024 – ದಕ್ಷಿಣ ಕನ್ನಡ ಜಿಲ್ಲೆಯಿಂದ ಪೃಥ್ವಿರಾಜ್ ಪಿ.ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ) newskadaba.com ಸೆ. 26. ರಾಜ್ಯ ಸರಕಾರದಿಂದ ಕೊಡಮಾಡುವ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೃಥ್ವಿರಾಜ್‌ ಪಿ. ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಕುರಿತು ರಾಜ್ಯ ಸರಕಾರವು ಆದೇಶವನ್ನು ಹೊರಡಿಸಿದೆ.


ಈ ಪ್ರಶಸ್ತಿಯನ್ನು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅಚ್ಚುಕಟ್ಟಾಗಿ ಒದಗಿಸಿರುವ ಅಧಿಕಾರಿಗಳ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮಾಡಳಿತ ಅಧಿಕಾರಿಗಳಿಗೆ ಕೊಡಲಾಗುತ್ತದೆ. ಹೀಗಾಗಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಸೇವೆಯನ್ನು ನೀಡಿರುವ ಅಧಿಕಾರಿಗಳ ಹೆಸರನ್ನು ಪ್ರಕಟಿಸಿ ಸರ್ಕಾರವು “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಸೆ.27ರಂದು ಬೆಳಗ್ಗೆ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ, ವಿಕಾಸ ಸೌಧದ ಕೊಠಡಿ ಸಂಖ್ಯೆ 419 ರಲ್ಲಿ ನಡೆಯಲಿರುವ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ.

error: Content is protected !!

Join WhatsApp Group

WhatsApp Share