ಸರಸ್ವತೀ ವಿದ್ಯಾಲಯ ಕಡಬ- ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 27. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಆಟೋಟ ಸ್ಪರ್ಧೆ 2024-25 ಇದರ ವತಿಯಿಂದ ಮಂಗಳೂರಿನ ಎಸ್.ಡಿ.ಎಂ ಮಂಗಳ ಜ್ಯೋತಿ ಸಮಗ್ರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ 17ರ ವಯೋಮಾನದ 35 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಕಡಬದ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಹರಿಪ್ರಸಾದ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈತನಿಗೆ ಕರಾಟೆ ಶಿಕ್ಷಕರಾದ ಶ್ರೀ ಯಾದವ ಬೀರಂತಡ್ಕ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಲಕ್ಷ್ಮೀಶ ಗೌಡ ಆರಿಗ ತರಬೇತಿ ನೀಡಿರುತ್ತಾರೆ. ಇವನು ಕಡಬ ವಿದ್ಯಾನಗರ ನಿವಾಸಿ ಶ್ರೀಮತಿ ವನಜ ಅವರ ಪುತ್ರ.

error: Content is protected !!

Join the Group

Join WhatsApp Group