ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸೆ. 28. ಚುನಾವಣಾ ಬಾಂಡ್‌ ಹಗರಣದಲ್ಲಿ ಸಿಲುಕಿರುವ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜಕೀಯ ಷಡ್ಯಂತರ ಮಾಡುತ್ತಿರುವ ಬಿಜೆಪಿ ಜೆಡಿಎಸ್‌‍ ನ ಕೆಲವು ಭ್ರಷ್ಟಾಚಾರಿಗಳು ಸಿದ್ದರಾಮಯ್ಯನವರ ರಾಜೀನಾಮೆ ನೀಡಬೇಕೆಂದು ಹೋರಾಟ ಮಾಡುತ್ತಿದ್ದಾರೆ. ಆದರೆ ಈಗ ಕೋಟ್ಯಂತರ ಅಕ್ರಮ ಚುನಾವಣಾ ಬಾಂಡ್‌ ಹಗರಣದಲ್ಲಿ ಭಾಗಿಯಾಗಿರುವ ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್‌ ರಾಜೀನಾಮೆಗೆ ಯಾಕೆ ನೀವು ಒತ್ತಾಯಿಸುವುದಿಲ್ಲ ಎಂಬುದರ ಬಗ್ಗೆ ಬಿಜೆಪಿ ಜೆಡಿಎಸ್‌‍ ಜನತೆಗೆ ತಿಳಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಉಮೇಶ್‌ ಪುಟ್ಟರಾಜು, ನವೀನ್‌, ಹೇಮರಾಜ್‌, ಕೌಶಿಕ್‌, ವಾಸು, ಮಧು, ಗಜೇಂದ್ರ ಭಾಗವಹಿಸಿದ್ದರು.

error: Content is protected !!

Join WhatsApp Group

WhatsApp Share