ಸುಳಿಗೆ ಸಿಲುಕಿ ನೀರುಪಾಲಾಗಿದ್ದ ಇಬ್ಬರು ಯುವಕರು ಓರ್ವ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಈಜಲು ತೆರಳಿದ್ದ ನಾಲ್ಕು ಮಂದಿ ಸ್ನೇಹಿತರ ಪೈಕಿ ಇಬ್ಬರು ನೀರಿನ ಸುಳಿಗೆ ಸಿಲುಕಿ ನೀರುಪಾಲಾದ ಘಟನೆಗೆ ಸಂಬಂಧಿಸಿದಂತೆ ಓರ್ವ ಯುವಕನ ಮೃತದೇಹ ಪತ್ತೆಯಾಗಿದೆ.

ಉರ್ವಸ್ಟೋರಿನ ಅನೀಶ್ (19) ಅವರ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಅನೀಶ್ ಅವರ ಮೃತದೇಹವನ್ನು ಬೆಂಗ್ರೆಯ ಮುಳುಗು ತಜ್ಞರು ಮೇಲೆಕ್ಕೆತ್ತಿದ್ದಾರೆ. ಕೊಟ್ಟಾರ ಚೌಕಿಯ ಸುಮಿತ್ (20) ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

Also Read  ಮೊಟ್ಟೆ ಬಳಸಿ ತಯಾರಿಸುವ ‘ಮಯೋನೆಸ್’ ನ್ನು ನಿಷೇಧಿಸಿದ ಕೇರಳ ಸರ್ಕಾರ…!!                 

error: Content is protected !!
Scroll to Top