ರಸ್ತೆ, ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು-ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.01) : ಅನಧಿಕೃತ ಕಟ್ಟಡಗಳನ್ನು  ಕೆಡವಲು ತಾನು ರೂಪಿಸುವ ಮಾರ್ಗಸೂಚಿಗಳು ದೇಶಾದ್ಯಂತ ಮತ್ತು ಎಲ್ಲಾ ಧರ್ಮಗಳಿಗೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್  ಹೇಳಿದೆ. ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು ಆಸ್ತಿಯ ಧ್ವಂಸಕ್ಕೆ ಆಧಾರವಾಗುವುದಿಲ್ಲ. ಹಾಗೆಂದು ಅತಿಕ್ರಮಣ ಮತ್ತು ಫುಟ್‍ಪಾತ್‍ಗಳನ್ನು ಅಸ್ತವ್ಯಸ್ತಗೊಳಿಸುವುದನ್ನು ಪ್ರೋತ್ಸಾಹಿಸುತ್ತಿಲ್ಲ. ಅನಧಿಕೃತ ನಿರ್ಮಾಣಕ್ಕೆ, ಒಂದು ಕಾನೂನು ಇರಬೇಕು, ಅದು ಧರ್ಮ ಅಥವಾ ನಂಬಿಕೆಗಳ ಮೇಲೆ ಅವಲಂಬಿತವಾಗಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸಾರ್ವಜನಿಕ ಸುರಕ್ಷತೆಯು ಬಹಳ ಮುಖ್ಯವಾಗಿದೆ. ರಸ್ತೆ, ಜಲಮೂಲಗಳು ಅಥವಾ ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ಕಟ್ಟಡಗಳನ್ನು ತೆರವು ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

error: Content is protected !!

Join the Group

Join WhatsApp Group