KSRTC ಬಸ್- ಬೈಕ್ ಢಿಕ್ಕಿ: ಒಂದೇ ಕುಟುಂಬದ ನಾಲ್ವರು ಮೃತ್ಯು

(ನ್ಯೂಸ್ ಕಡಬ)newskadaba.com ಬೀದರ್, ಅ. 08. KSRTC ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು ಭೀಕರ ಅಪಘಾತ ಸಂಭವಿಸಿದೆ. ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದವರಾಗಿದ್ದಾರೆ. ಬೈಕ್‌ನಲ್ಲಿ ಜಮೀನಿನ ಕೆಲಸ‌ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಹೈದ್ರಾಬಾದ್‌ನಿಂದ ಬೀದರ್ ಕಡೆಗೆ ಬರುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿಯಾಗಿದೆ. ಮೃತರನ್ನು ಗಣೇಶಪುರದ ಸಿದ್ದರಾಮಪ್ಪ (71), ಅವರ ಪುತ್ರಿ ರೇಣುಕಾ (36), ಅಳಿಯ ಜಗನ್ನಾಥ್ (41) ಮತ್ತು ಮೊಮ್ಮಗ ವಿನಯ್ ಕುಮಾರ್ (15) ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಬಸ್‌ ಬಿಟ್ಟು ಚಾಲಕ ಹಾಗೂ ನಿರ್ವಾಹಕ ಪರಾರಿಯಾಗಿದ್ದಾರೆ ಎನ್ನಲಾಗಿದೆ.

Also Read  ಹಿಜಾಬ್ ಧರಿಸಿದ್ದಕ್ಕೆ ವೈದ್ಯೆಗೆ ನಿಂದಿಸಿ ಕರ್ತವ್ಯಕ್ಕೆ ಅಡ್ಡಿ ➤ ಬಿಜೆಪಿ ಕಾರ್ಯಕರ್ತನ ವಿರುದ್ಧ ಕೇಸ್ ದಾಖಲು

 

error: Content is protected !!
Scroll to Top