ಆಯುಷ್ ಕ್ಷಾರಸೂತ್ರ ಚಿಕಿತ್ಸಾ ಅಭಿಯಾನ

(ನ್ಯೂಸ್ ಕಡಬ) newskadaba.com ಅ. 11. ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಜಿಲ್ಲಾ ಆಯುಷ್ ಆಸ್ಪತ್ರೆ ವೆನ್‍ಲಾಕ್ ಆವರಣ ಮಂಗಳೂರು ಇಲ್ಲಿ ಪ್ರತೀ ತಿಂಗಳ 3ನೇ ಶುಕ್ರವಾರ ಮೂಲವ್ಯಾಧಿ, Piles Fistula and Fissure ಇನ್ನಿತರ ಗುದಗತ ರೋಗಗಳಿಂದ ಬಳಲುತ್ತಿರುವವರಿಗೆ ಉಚಿತ ಪರಿಣಾಮಕಾರಿ ಆಯುರ್ವೇದ ಕ್ಷಾರಸೂತ್ರ ಚಿಕಿತ್ಸಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಆಯುರ್ವೇದ ಶಸ್ತ್ರಚಿಕಿತ್ಸಾ ತಜ್ಞರಾದ ಡಾ|| ರವಿಶಂಕರ್ ಪೆರುವಾಜೆ ಇವರು ರೋಗಿಗಳ ತಪಾಸಣೆ ನಡೆಸಿ ಚಿಕಿತ್ಸೆಯನ್ನು ನೀಡುವರು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಲು ಕೋರಿದೆ. ಹೆಚ್ಚಿನ ಮಾಹಿತಿಗೆ ಶಿಬಿರದ ನೋಡಲ್ ಅಧಿಕಾರಿ ಡಾ|| ಶೋಭರಾಣಿ ಮೊ.ಸಂ. 6360571591. ಆಯುಷ್ ಅಧಿಕಾರಿ ಕಚೇರಿ ದೂರವಾಣಿ ಸಂಖ್ಯೆ: 0824-2453063, 0824-2446272 ಸಂಪರ್ಕಿಸುವಂತೆ ಜಿಲ್ಲಾ ಆಯುಷ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group