ಮಕ್ಕಳ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಅ. 11. ತಾವೇ ಜನ್ಮ ನೀಡಿದ ಮಕ್ಕಳ ಕಿರುಕುಳ ಸಹಿಸಲಾಗದೇ ವೃದ್ಧ ದಂಪತಿ ನೀರಿನ ಟ್ಯಾಂಕ್‌ ಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ನಾಗೌರ್‌ನ ಕರ್ನಿ ಕಾಲೋನಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದೆ. ಕರ್ನಿ ಕಾಲೋನಿಯಲ್ಲಿರುವ ತಮ್ಮ ಮನೆಯೊಳಗಿನ ನೀರಿನ ಟ್ಯಾಂಕ್‌ ನಲ್ಲಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎರಡು ದಿನಗಳಿಂದ ದಂಪತಿ ಕಾಣದ ಹಿನ್ನೆಲೆ ಅನುಮಾನಗೊಂಡ ನೆರೆಹೊರೆಯವರು ದಂಪತಿಯ ಮಗನಿಗೆ ಮಾಹಿತಿ ನೀಡಿದ್ದಾರೆ. ನಂತರ ಮಗ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಟ್ಯಾಂಕ್‌ ನ ಮುಚ್ಚಳ ತೆರೆದು ಪರಿಶೀಲಿಸಿದಾಗ ದಂಪತಿಯ ಮೃತದೇಹ ನೀರಿನಲ್ಲಿ ತೇಲುತ್ತಿರುವುದು ಕಂಡು ಬಂದಿದೆ. ಬಳಿಕ ಮನೆಯ ಗೋಡೆಯಲ್ಲಿ ಆತ್ಮಹತ್ಯೆ ಪತ್ರವೊಂದು ಪೊಲೀಸರಿಗೆ ದೊರೆತಿದ್ದು, ಅದರಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಪುತ್ರರು ಮತ್ತು ಸೊಸೆಯರು ಕಿರುಕುಳ ನೀಡುತ್ತಿದ್ದಾರೆ. ಮಕ್ಕಳು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ, ಪೊಲೀಸರ ಬಳಿ ಹೋದರೆ ರಾತ್ರಿ ಮಲಗಿದ್ದಾಗ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ಬರೆದಿರುವುದಾಗಿ ತಿಳಿದುಬಂದಿದೆ.

error: Content is protected !!

Join the Group

Join WhatsApp Group