ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್ – ಚಾಲಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಅ. 12. ಬೆಂಗಳೂರು ಮೂಲದ ಖಾಸಗಿ ಸ್ಲೀಪರ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ಮೃತರು ಬೆಂಗಳೂರು ಮೂಲದವರೆಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಷ್ಟೇ. ಈ ಖಾಸಗಿ ಸ್ಲೀಪರ್‌ ಬಸ್‌ ಗುರುವಾರದಂದು ಬೆಂಗಳೂರಿನಿಂದ ಬಂದು ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ಶುಕ್ರವಾರ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್‌-ಅಪ್‌ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಗೋಕರ್ಣದಿಂದ ಡ್ರೈವರ್‌ ಮತ್ತು ಸಹ-ಡ್ರೈವರ್‌ ಮಾತ್ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಹೆಚ್ಚಿನ ಸಾವು ನೋವು ಸಂಭವಿಸಿಲ್ಲ.

error: Content is protected !!

Join the Group

Join WhatsApp Group