ಅಕ್ರಮ ಮರಳು ಸಾಗಾಟ- ಸ್ಥಳೀಯರಿಂದ ದೂರು

(ನ್ಯೂಸ್ ಕಡಬ) newskadaba.com ಅ. 12. ಸರ್ಕಾರಿ ಜಾಗದಿಂದ ಅಕ್ರಮವಾಗಿ ಮರಳನ್ನು ತೆಗೆದು ಸಾಗಾಟ ಮಾಡಲಾಗುತ್ತಿದೆ ಎಂದು ನಗರದ ಹೊರವಲಯದ ಬೆಂಗ್ರೆಯ ಸ್ಥಳೀಯ ನಿವಾಸಿಗಳು ದೂರು ನೀಡಿರುವ ಕುರಿತು ವರದಿಯಾಗಿದೆ.

ತೋಟಬೆಂಗ್ರೆ ಹಿಂದೂ ರುದ್ರಭೂಮಿಯ ಸಮೀಪ ಸುಮಾರು 6 ಎಕರೆ ಜಾಗವನ್ನು ಮೀನುಗಾರಿಕಾ ಇಲಾಖೆಗೆ ಬಂದರು ಇಲಾಖೆಯಿಂದ ಹಸ್ತಾಂತರಿಸಲಾಗಿತ್ತು. ಜೆಟ್ಟಿ ನಿರ್ಮಾಣ ಮಾಡುವ ಉದ್ದೇಶದಿಂದ ಇದನ್ನು ನೀಡಲಾಗಿದ್ದು, ಬಾಕಿ ಉಳಿದ ಜಾಗದಲ್ಲಿ ಹಾಗೆಯೇ ಎಷ್ಟೋ ವರ್ಷಗಳಿಂದ ಮರಳು ಇದೆ. ಅದನ್ನು ತೆರವು ಮಾಡುವಂತಿಲ್ಲ. ಆದರೆ 3-4 ತಿಂಗಳ ಹಿಂದಿನಿಂದಲೇ ಇಲ್ಲಿಂದ ಯಾರೋ ಕೆಲವರು ರಾತ್ರಿ ಹೊತ್ತು ಜೆಸಿಬಿ ಹಾಗೂ ಟಿಪ್ಪರ್ ಬಳಸಿ ಮರಳು ಕೊಂಡೊಯ್ಯುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ದೂರಿನಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group