ಉಡುಪಿ: ದುಬೈನ ಸಂಸ್ಥೆಗೆ 2.5 ಕೋಟಿ ವಂಚಿಸಿದ ಆರೋಪಿಯ ಬಂಧನ



(ನ್ಯೂಸ್ ಕಡಬ)newskadaba.com,. 14 ದೆಹಲಿ:  ಅನಿವಾಸಿ ಭಾರತೀಯ, ವಕ್ವಾಡಿ ಮೂಲದ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಬಾರ್ಕೂರು ಮೂಲದ ನಾಗೇಶ್ ಪೂಜಾರಿ ಅಕೌಂಟೆಂಟ್ ಆಗಿ ಸೇರಿ, ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಳಿಕ ಜಿಲ್ಲಾ ಸೆಶನ್ಸ್ ನ್ಯಾಯಾಲಯ &  ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಜಾಮೀನು ರದ್ಧು ಆದೇಶವಾದ ಬೆನ್ನಲ್ಲೇ ತಲೆ ಮರೆಸಿಕೊಂಡಿದ್ದ ಆರೋಪಿ ನಾಗೇಶ್ ಪೂಜಾರಿಯನ್ನು ಉಡುಪಿ ಪೊಲೀಸರು ಮೈಸೂರಿನ ನಂಜನಗೂಡು ಬಳಿ ಬಂಧಿಸಿದ್ದಾರೆ.







 

ಬಂಧಿತ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಹೆಚ್ಚಿನ ತನಿಖೆಗಾಗಿ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.






error: Content is protected !!
Scroll to Top