ಭಾರೀ ಮಳೆಗೆ ಗುಡ್ಡ ಕುಸಿತ- ರಸ್ತೆ ಸಂಚಾರ ಅಸ್ತವ್ಯಸ್ತ..!

(ನ್ಯೂಸ್ ಕಡಬ) newskadaba.com ಅ. 14. ಭಾರೀ ಮಳೆಗೆ ಗುಡ್ಡ ಕುಸಿದು ರಸ್ತೆ ಹಾಗೂ ಮನೆಯ ಮೇಲೆ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ಭಾನುವಾರದಂದು ರಾತ್ರಿ ಸಂಭವಿಸಿದೆ.

ರಸ್ತೆಯಲ್ಲಿ ವಾಹನ ಹಾಗೂ ಜನರ ಸಂಚಾರಕ್ಕೆ ತೊಡಕಾಗುವ ರೀತಿಯಲ್ಲಿ ಮುಚ್ವಿ ಹೋಗಿದೆ. ಭಾನುವಾರದಂದು ರಾತ್ರಿ ಸುರಿದ ಭಾರೀ ಮಳೆಗೆ ಮುಂಡಾಜೆ ಗ್ರಾಮದ ಪಿಲತ್ತಡ್ಕ ಎಂಬಲ್ಲಿ ವನದುರ್ಗಾ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಶ್ರೀಧರ ಪೂಜಾರಿ ಎಂಬವರ ಮನೆ ಸಮೀಪ ಗುಡ್ಡ ಕುಸಿದಿದ್ದು, ರಸ್ತೆಗೆ ಹಾಗೂ ಮನೆಯ ಹಿಂಭಾಗದಲ್ಲಿ ಮಣ್ಣು ಬಿದ್ದಿದೆ. ರಸ್ತೆ ಸಂಪೂರ್ಣ ಮುಚ್ಚಿ ಹೋಗಿದ್ದು ಜನರ ಹಾಗೂ ವಾಹನಗಳ ಸಂಚಾರ ಅಸಾಧ್ಯವಾಗಿದೆ. ಮನೆಯ ಹಿಂಭಾಗದಲ್ಲಿಯೂ ಮಣ್ಣು ಬಿದ್ದಿದ್ದು ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಸ್ಥಳೀಯ ಯುವಕರು ರಸ್ತೆಗೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯವನ್ನು ಆರಂಭಿಸಿದ್ದಾರೆ.

error: Content is protected !!

Join the Group

Join WhatsApp Group