ಸುಳ್ಯ: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಂಡಕ್ಟರ್ ಗೆ ಎದೆನೋವು; ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ)newskadaba.com,. 14 ಸುಳ್ಯ: ಸುಳ್ಯದ ತೊಡಿಕಾನ ಸರ್ವಿಸ್ ಖಾಸಗಿ ಅವಿನಾಶ್ ಬಸ್ ನಲ್ಲಿ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಗುರುಪ್ರಸಾದ್ ಕುಂಚಡ್ಕ ಎಂಬ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಇಂದು ವರದಿಯಾಗಿದೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿದೆ.

ತಕ್ಷಣ ಅವರನ್ನು ರಿಕ್ಷಾವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅರಂಬೂರು ಬಳಿ ಆಟೋ ರಿಕ್ಷಾದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Also Read  ಕಾಸರಗೋಡು: ಪತ್ರಕರ್ತ ಸೇರಿದಂತೆ ಇಬ್ಬರಿಗೆ ಕೊರೋನ ಪಾಸಿಟಿವ್

error: Content is protected !!
Scroll to Top