ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಯುವಕವಿಗೋಷ್ಠಿ

(ನ್ಯೂಸ್ ಕಡಬ) newskadaba.com ಅ.16. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕರ್ನಾಟಕ ಸಂಭ್ರಮ – 50ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು `ಯುವಕವಿ ಗೋಷ್ಟಿ’ಗಳನ್ನು ಆಯೋಜಿಸಲಾಗಿದ್ದು, ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ.


ರಾಜ್ಯದ ಎಲ್ಲಾ ಭಾಗದ ಆಸಕ್ತ ಕವಿಗಳು ಕನಿಷ್ಠ 3 ಕವಿತೆಗಳನ್ನು ಕಳುಹಿಸಿಕೊಡಬಹುದು. ಕವಿತೆಗಳನ್ನು ಕಳುಹಿಸಲು ಅಕ್ಟೋಬರ್ 30 ಕೊನೆಯ ದಿನ. ಆಸಕ್ತ ಕವಿಗಳು ಕವಿತೆಗಳನ್ನು ಸಲ್ಲಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಾಲತಾಣ karnatakasahithyaacademy.org ಮೂಲಕ ಪಡೆದುಕೊಳ್ಳುವಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group