ಬೋಟ್ ದುರಂತದಲ್ಲಿ ನಾಪತ್ತೆಯಾದ ಮೃತದೇಹ ಪತ್ತೆ..!



(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.18. ಪಡನ್ನ ಆಯಿತ್ತಲ ಸಮುದ್ರದಲ್ಲಿ ಬೋಟ್ ದುರಂತದಲ್ಲಿ ನಾಪತ್ತೆಯಾದ ಬೆಸ್ತನ ಮೃತದೇಹ ಪೂಂಜಾವಿ ತೀರದಲ್ಲಿ ಗುರುವಾರ ಪತ್ತೆಯಾಗಿದೆ.







ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್, ಎಂ.ರಾಜ ಗೋಪಾಲ್, ಜಿಲ್ಲಾ ಪೊಲೀಸ್ ಮುಖ್ಯಸ್ಥ ಡಿ.ಶಿಲ್ಪಾ ನೇತೃತ್ವ ನೀಡಿದ್ದರು. ದುರಂತದಲ್ಲಿ ಮೃತಪಟ್ಟ ಅಬೂಬಕ್ಕರ್ ರವರ ಮೃತ ದೇಹ ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು. ಬುಧವಾರ ಮಧ್ಯಾಹ್ನ ಆಯಿತ್ತಲ ಸಮುದ್ರದಲ್ಲಿ ಫೈಬರ್ ಬೋಟ್ ದುರಂತಕ್ಕೀಡಾಗಿತ್ತು. ದೋಣಿಯಲ್ಲಿದ್ದ 37 ಮಂದಿಯಲ್ಲಿ 35 ಮಂದಿಯನ್ನು ರಕ್ಷಿಸಲಾಗಿತ್ತು. ಓರ್ವ ಮೃತಪಟ್ಟು, ಓರ್ವ ನಾಪತ್ತೆಯಾಗಿದ್ದರು. ಕರಾವಳಿ ಪೊಲೀಸರು, ಮೀನುಗಾರರು ಸಿಲುಕಿದವರನ್ನು ಮೇಲಕ್ಕೆತ್ತಿ ರಕ್ಷಿಸಿದರು.






 

 

error: Content is protected !!
Scroll to Top