ನಿರುದ್ಯೋಗ ನಿವಾರಣೆಗೆ ‘ವಿಂಗ್’ ಸ್ಥಾಪನೆ, ಉದ್ಯೋಗ ಕಲ್ಪಿಸುವುದೇ ನನ್ನ ಮೊದಲ ಆದ್ಯತೆ: ಎಚ್ ಡಿಕೆ

(ನ್ಯೂಸ್ ಕಡಬ) newskadaba.com .19, ಮಂಡ್ಯ:  ಕರ್ನಾಟಕ ಸೇರಿದಂತೆ ದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಕೈಗಾರಿಕಾ ಇಲಾಖೆಯಿಂದ ವಿಂಗ್ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಕೇಂದ್ರ ಉಕ್ಕು ಹಾಗೂ ಭಾರೀ ಕೈಗಾರಿಕಾ ಸಚಿವ ಎಚ್. ಡಿ. ಕುಮಾರಸ್ವಾಮಿ ತಿಳಿಸಿದರು.

ನಗರದಲ್ಲಿ ಶುಕ್ರವಾರ ಕೇಂದ್ರ ಕೈಗಾರಿಕಾ ಇಲಾಖೆ, ಜಿಲ್ಲಾಡಳಿತ ಹಾಗೂ ವಿವಿಧ ಖಾಸಗಿ ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು. ಕೇಂದ್ರದ ಕೈಗಾರಿಕಾ ಸಚಿವನಾಗಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವುದೇ ನನ್ನ ಮೊದಲ ಆದ್ಯತೆ ಎಂದರು. ಮಂಡ್ಯ, ಮೈಸೂರು, ತುಮಕೂರು, ಹಾಸನ, ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದ ಹಲವು ನಗರಗಳಲ್ಲಿ ಕೈಗಾರಿಕೋದ್ಯಮ ಸ್ಥಾಪನೆಯ ಚಿಂತನೆಯಿದೆ. ಬಂಡವಾಳ ಹೂಡಿಕೆದಾರರು ಮುಂದೆ ಬಂದಿದ್ದಾರೆ. ಜೊತೆಗೆ ರಾಜ್ಯ ಸರ್ಕಾರದ ಸಹಕಾರ ಬೇಕು. ಕೈಗಾರಿಕೋದ್ಯಮಿಗಳ ಜೊತೆಗೆ ಚರ್ಚೆ ನಡೆಸಿದ್ದು, ಕೆಲಸಗಳು ಶೀಘ್ರ ಪ್ರಾರಂಭವಾಗಲಿವೆ ಎಂದರು.

Also Read  Breaking News ➤ ಕಡಬ: ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!

error: Content is protected !!
Scroll to Top