ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಅಪಘಾತ- ಆರು ಯಾತ್ರಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಅ. 22. ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಗಾಯಗೊಂಡ ಘಟನೆ ಅಜೆಕಾರು ಬಳಿ ಕಾರ್ಕಳದ ಅಜೆಕಾರು ಎಂಬಲ್ಲಿ ನಡೆದಿದೆ.

ಗಾಯಗೊಂಡವರನ್ನು ಮಂಜುನಾಥಗೌಡ (28), ಆತ್ಮಾನಂದ (24), ಹನುಮಂತಗೌಡ (23), ಹಾಲಪ್ಪ ಗೌಡ (24), ವೀರಭದ್ರಗೌಡ (28), ಮತ್ತು ಬಸನಗೌಡ (27) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಮೂಲದ ಆರು ಮಂದಿ ಇನ್ನೋವಾ ಕಾರಿನಲ್ಲಿ ಆಗುಂಬೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಅಜೆಕಾರು ಬಳಿಯ ರಾಜ್ಯ ಹೆದ್ದಾರಿಯ ಸೇತುವೆಗೆ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನ ಮುಂಭಾಗದ ಭಾಗಕ್ಕೆ ತೀವ್ರ ಹಾನಿಯಾಗಿದೆ. ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!

Join WhatsApp Group

WhatsApp Share