ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ.


ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರ ಪರವಾಗಿ ವಾದಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಬೆನ್ನುಹುರಿ ನೋವಿನಿಂದ ದರ್ಶನ್ ಬಳಲುತ್ತಿದ್ದಾರೆ. ಹೀಗಾಗಿ ಅನಾರೋಗ್ಯದ ಕಾರಣಕ್ಕೂ ಜಾಮೀನು ಕೇಳುತ್ತಿದ್ದೇವೆ ಎಂದು ಕೋರ್ಟ್ ಗಮನಕ್ಕೆ ತಂದರು.

Also Read  ದಿಡುಪೆ ಕಡಮಗುಂಡಿಯಲ್ಲಿ ಪ್ರವಾಸಿಗರ ದಂಡು ➤ ಕಲುಷಿತಗೊಳ್ಳುತ್ತಿದೆ ಜಲಪಾತದ ನೀರು

 

error: Content is protected !!
Scroll to Top