ಶೀಘ್ರದಲ್ಲಿ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

(ನ್ಯೂಸ್ ಕಡಬ) newskadaba.com .23,  ಬೆಂಗಳೂರು.  ಆಂಗ್ಲ ಭಾಷೆಯಿಂದ ಕನ್ನಡಕ್ಕೆ ಅನುವಾದ  ಮಾಡುವ ಸಮರ್ಥ ಕನ್ನಡ ಕಸ್ತೂರಿ ತಂತ್ರಾಂಶವನ್ನು ಇ-ಆಡಳಿತ ಇಲಾಖೆ ಸಿದ್ಧಪಡಿಸಿದ್ದು, ಶೀಘ್ರದಲ್ಲಿಯೇ ಈ ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ಕನ್ನಡ ಅಭಿವೃದ್ದಿ  ಪ್ರಾಧಿಕಾರದ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿ ರಾಜ್ಯ ಸರಕಾರದ ಇ-ಆಡಳಿತ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿರುವ ಇ-ಕನ್ನಡ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದ ಅವರು, ಉದ್ದೇಶಿತ ತಂತ್ರಾಂಶವು ಇಂದಿನ ಖಾಸಗಿ ತಂತ್ರಾಂಶಗಳಿಂದ ಅತಿ ಹೆಚ್ಚು ದಕ್ಷತೆಯನ್ನು   ಹೊಂದಿದ್ದು ಸುಮಾರು 2.3 ಕೋಟಿ ಆಂಗ್ಲ ಹಾಗೂ ಕನ್ನಡ ಸಮಾನಾಂತರ ವಾಕ್ಯಗಳನ್ನು ಆಧರಿಸಿ ಸಿದ್ಧಗೊಳಿಸಿದೆ.

error: Content is protected !!

Join the Group

Join WhatsApp Group