ಬಾಬಾ ಸಿದ್ದಿಕ್ ಪುತ್ರ ಅಜಿತ್ ಪವಾರ್ ಪಕ್ಷಕ್ಕೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಮುಂಬೈ, ಅ.25. ಅಕ್ಟೋಬರ್ 12 ರಂದು ಗುಂಡೇಟಿಗೆ ಬಲಿಯಾದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಪುತ್ರ ಜೀಶನ್ ಸಿದ್ದಿಕ್ ಅವರು ಇಂದು ಬೆಳಿಗ್ಗೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ನೇತೃತ್ವದ ಬಣವನ್ನು ಸೇರಿದ್ದಾರೆ.

ಮಹಾರಾಷ್ಟ್ರ ವಿಧಾನ ಪರಿಷತ್ತಿನ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ವಿರುದ್ಧ ಮತ ಚಲಾಯಿಸಿದ ಆರೋಪದ ಮೇಲೆ ಅವರನ್ನು ಆಗಸ್ಟ್‌ ನಲ್ಲಿ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು. ಇದೀಗ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಬಣಕ್ಕೆ ಕಾಲಿಟ್ಟಿದ್ದಾರೆ. ಮಹಾರಾಷ್ಟ್ರದ ಮಾಜಿ ಸಚಿವರಾದ ಬಾಬಾ ಸಿದ್ದಿಕ್ ಅವರು 1999 ರಿಂದ 2009 ರವರೆಗೆ ಕಾಂಗ್ರೆಸ್ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಸ್ಥಾನವನ್ನು ವಿಸರ್ಜಿಸಿ ವಿಭಜನೆಯಾದ ನಂತರ ಅವರು 2009 ರಿಂದ 2014 ರವರೆಗೆ ವಂಡ್ರೆ ಪಶ್ಚಿಮವನ್ನು ಪ್ರತಿನಿಧಿಸಿದರು. ಈ ವರ್ಷದ ಆರಂಭದಲ್ಲಿ ಅವರು ಕಾಂಗ್ರೆಸ್ ತೊರೆದು ಅಜಿತ್ ಪವಾರ್ ಪಕ್ಷದ ಜೊತೆಯಾಗಿದ್ದಾರೆ.

Also Read  ಪುತ್ತೂರು : ಜುಲೈ 04, 07, ಹಾಗೂ 09 ರಂದು ವಿದ್ಯುತ್ ನಿಲುಗಡೆ

 

error: Content is protected !!
Scroll to Top