ಉಪಚುನಾವಣೆ- ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಹಾವೇರಿ, ಅ.25. ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಖಾನ್ ಪಠಾಣ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಪ್ರಾಯ ಇಲ್ಲ. ನಾವು ಎಲ್ಲರೂ ಈ ಮೊದಲೇ ಜನತಾ ನ್ಯಾಯಾಲಯದಲ್ಲಿ ಪ್ರಮಾಣ ಮಾಡಿದ್ದೇವೆ. ಯಾರಿಗೇ ಟಿಕೆಟ್ ಸಿಕ್ಕರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿದೆ ಹೇಳಿದ್ದೆ. ಕಾಂಗ್ರೆಸ್ ಬಗ್ಗೆ ಕ್ಷೇತ್ರದಲ್ಲಿ ಉತ್ತಮ ಒಲವು ಇದೆ. ಕಳೆದ ನಾಲ್ಕು ತಿಂಗಳಿಂದ ನಿರಂತರವಾಗಿ ಕ್ಷೇತ್ರ ಸುತ್ತಾಡಿದ್ದೇನೆ ಎಂದರು.  

 

Scroll to Top