ಪರಾರಿಯಾಗಿದ್ದ ದರೋಡೆ ಪ್ರಕರಣದ ಆರೋಪಿ ಕೊನೆಗೂ ಅರೆಸ್ಟ್..!

crime, arrest, suspected

(ನ್ಯೂಸ್ ಕಡಬ) newskadaba.com ಅ.26. ಕೆಲ ದಿನಗಳ ಹಿಂದೆ ಸರಕಾರಿ ಆಸ್ಪತ್ರೆಯ ಬಳಿ ಪೊಲೀಸರ ಕೈಯಿಂದ ತಪ್ಪಿಸಿ ಪರಾರಿಯಾಗಿದ್ದ ಕಳ್ಳನೋರ್ವನನ್ನು ಸುಳ್ಯ ಪೊಲೀಸರು ಹಿಡಿದು ತರುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ತಮಿಳುನಾಡು ಮೂಲದ ಕಾರ್ತಿಕ್ ಎಂದು ಗುರುತಿಸಲಾಗಿದೆ. ಸಂಪಾಜೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ ಈತ​ನನ್ನು ಪೊಲೀಸರು ತಮಿಳುನಾಡಿನಿಂದ ಸೆರೆಹಿಡಿದು ಸುಳ್ಯಕ್ಕೆ ಕರೆ ತಂದು, ಆತನ ಆರೋಗ್ಯ ತಪಾಸಣೆಗೆಂದು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಈ ವೇಳೆ ಆತ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿ ತಮಿಳುನಾಡು ಕಡೆಗೆ ಹೋಗಿದ್ದ ಎಂಬ ಸಂಶಯ ವ್ಯಕ್ತವಾಗಿತ್ತು. ಇದೀಗ ಪೊಲೀಸರು ಆತನನ್ನು ತಮಿಳುನಾಡಿನ ಸತ್ಯಮಂಗಲಂ ಪರಿಸರದಲ್ಲಿ ವಶಕ್ಕೆ ಪಡೆದು ಸುಳ್ಯಕ್ಕೆ ಕರೆ ತಂದಿದ್ದಾರೆ‌ ಎಂದು ತಿಳಿದುಬಂದಿದೆ.

error: Content is protected !!
Scroll to Top