ಬೈಕ್‌- ಖಾಸಗಿ ಬಸ್ ಡಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 04. ಖಾಸಗಿ ಬಸ್ ಬೈಕ್‌ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಮೃತಪಟ್ಟಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ.

ಮೃತರನ್ನು ಕಡೆಗೋಳಿ ನಿವಾಸಿ ಪ್ರವೀಣ (30) ಎಂದು ಗುರುತಿಸಲಾಗಿದೆ. ಸಂದೀಪ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ಇಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಖಾಸಗಿ ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಬೈಕ್ ಸವಾರರಿಬ್ಬರಿಗೆ ಡಿಕ್ಕಿಯಾಗಿದೆ. ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ನಾಳೆ(ಮೇ.22) ನೆಕ್ಕಿತ್ತಡ್ಕದಲ್ಲಿ ಶುದ್ಧ ತೆಂಗಿನೆಣ್ಣೆ ತಯಾರಿ ಘಟಕ ಶುಭಾರಂಭ ➤ ನೂತನ ತಂತ್ರಜ್ಞಾನದ ಆಯಿಲ್ & ಫ್ಲೋರ್ ಮಿಲ್

 

 

error: Content is protected !!
Scroll to Top