ಸಿದ್ದರಾಮಯ್ಯರ ರಾಜೀನಾಮೆ ಮುಹೂರ್ತನಿಗದಿ- ವಿಜಯೇಂದ್ರ

(ನ್ಯೂಸ್ ಕಡಬ) newskadaba.com . 05 ಬೆಂಗಳೂರು: ರಾಜ್ಯದ ಸಿ.ಎಂ ಸಿದ್ದರಾಮಯ್ಯನವರ ರಾಜೀನಾಮೆ ಮುಹೂರ್ತ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಕಟಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಚರ್ಚೆ ಮಾಡಿ ಈಗಾಗಲೇ ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿ ಮಾಡಿದ್ದಾರೆ. ಆ ಮುಹೂರ್ತ ಯಾವುದೆಂದು ಸಿದ್ದರಾಮಯ್ಯನವರೇ ಬಾಯಿ ಬಿಡಬೇಕಿದೆ. ಸಿದ್ದರಾಮಯ್ಯನವರ ರಾಜೀನಾಮೆ ನಿಶ್ಚಿತವಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಪೂರ್ಣ ಅವಧಿ ಪೂರೈಸುವುದಿಲ್ಲ; ಅತಿ ಶೀಘ್ರವೇ ರಾಜೀನಾಮೆ ಕೊಡುತ್ತಾರೆ ಎಂದ ಅವರು, 5 ವರ್ಷ ಕಾಲ ಸಿಎಂ ಆಗಿರುವುದಾಗಿ ರಾಜ್ಯದ ಜನರಿಗೆ ಸಿದ್ದರಾಮಯ್ಯನವರು ಹೇಳಲಿ; ನೋಡೋಣ ಎಂದು ಸವಾಲು ಹಾಕಿದರು.

Also Read  SSLC, PUC ಪರೀಕ್ಷಾ ದಿನಾಂಕ ಪ್ರಕಟ

ಮುಖ್ಯಮಂತ್ರಿಗಳು ಮತ್ತವರ ಕುಟುಂಬ ಆರೋಪಿ ಸ್ಥಾನದಲ್ಲಿ ನಿಂತಿದೆ. ಭ್ರಷ್ಟಾಚಾರದ ಸಂಬಂಧ ರಾಜ್ಯದ ಜನತೆಗೆ ಅವರು ಉತ್ತರ ಕೊಡಬೇಕಿದೆ ಎಂದು ಆಗ್ರಹಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ನೋಟಿಸ್ ಕೊಟ್ಟು ತನಿಖೆಗೆ ಬರಲು ತಿಳಿಸಿದ್ದಾರೆ.

error: Content is protected !!
Scroll to Top