(ನ್ಯೂಸ್ ಕಡಬ) newskadaba.com ನ. 06 ಬೆಂಗಳೂರು : ಬಿಗ್ ಬಾಸ್ ಕನ್ನಡ -11 ಕಾರ್ಯಕ್ರಮದಲ್ಲಿದ್ದ ಜಗದೀಶ್ ಬಿಗ್ಬಾಸ್ ಮನೆಯಿಂದ ಆಚೆ ಬಂದ ನಂತರ ಮತ್ತೆತಮ್ಮ ಹಳೆ ಸ್ಟೈಲ್ ಗೆ ಮರಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ರವರ ಬಗ್ಗೆ ಜಗದೀಶ್ ಬಹಳಷ್ಟು ಬಾರಿ ಮಾತನಾಡಿದ್ದಾರೆ. ಇದೀಗ ದರ್ಶನ್ ಮಧ್ಯಂತರ ಜಾಮೀನಿನ ಮೇರೆಗೆ ಹೊರಬಂದಿದ್ದು, ದರ್ಶನ್ ಅಭಿಮಾನಿಗಳು ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಜಗದೀಶ್ ಆರೋಪಿಸಿ ದರ್ಶನ್ ಹಾಗೂ ಅವರ ಅಭಿಮಾನಿಯೋರ್ವರ ಮೇಲೆ ದೂರು ದಾಖಲಿಸಿದ್ದಾರೆ. ಈ ಸಂಬಂಧ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.














