ಸಿಐಎಸ್‌ಎಫ್ ಅಧಿಕಾರಿ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರವಾರ, . 12. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಸಿಐಎಸ್‌ಎಫ್ ಅಧಿಕಾರಿ ತಮ್ಮ ಪಿಸ್ತೂಲಿನಿಂದ ಶೂಟ್‌ ಮಾಡಿಕೊಂಡು ಮೃತಪಟ್ಟಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವುದು ಖಾಸಗಿ ಕಾರಣದಿಂದಲೋ ಅಥವಾ ಅಧಿಕಾರಿಗಳ ಕಿರುಕುಳ ಕಾರಣದಿಂದಲೋ ಎಂಬುದು ಇನ್ನೂ ತಿಳಿದಿಲ್ಲ. ಸದ್ಯ ಯಾವುದೇ ಡೆತ್‌ ನೋಟ್‌ ದೊರೆತಿಲ್ಲ. ರಕ್ಷಣಾ ಸಿಬ್ಬಂದಿಯ ಆತ್ಮಹತ್ಯೆಯಿಂದ ಕೈಗಾದಲ್ಲಿ ಆತಂಕ‌ ಸೃಷ್ಠಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Also Read  ಕರಾವಳಿ‌ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಂಭವ ➤ ಹವಾಮಾನ ಇಲಾಖೆ ಮುನ್ಸೂಚನೆ

 

error: Content is protected !!
Scroll to Top