ರೀಲ್ಸ್‌ ಗಾಗಿ ಪೆಟ್ರೋಲ್‌ ಬಾಂಬ್‌ ಸ್ಫೋಟ: ವಿದ್ಯಾರ್ಥಿಗಳ ವಿರುದ್ಧ ಕೇಸ್‌

(ನ್ಯೂಸ್ ಕಡಬ) newskadaba.com . 14. ರೀಲ್ಸ್‌ ಗಾಗಿ ವಿದ್ಯಾರ್ಥಿಗಳು ಪೆಟ್ರೋಲ್ ಬಾಂಬ್ ಸ್ಪೋಟಿಸಿ ಎಲ್ಲೆ ಮೀರಿ ವರ್ತಿಸಿರುವ ಘಟನೆ ಹಾಸನ ಹೊರವಲಯದ ಬೊಮ್ಮನಾಯಕನಹಳ್ಳಿಯಲ್ಲಿ ನಡೆದಿದೆ.

ಆರ್ಯುವೇದ ಕಾಲೇಜಿನಲ್ಲಿ ಓದುತ್ತಿರುವ ಹಾಸನ ನಗರದ ಇಬ್ಬರು, ಕುಣಿಗಲ್ ತಾಲ್ಲೂಕಿನ ಓರ್ವ ವಿದ್ಯಾರ್ಥಿ ರಾತ್ರಿ ವೇಳೆ ಕಾಲೇಜಿನ ಎದುರಿನ ರಸ್ತೆಯಲ್ಲಿ ಪ್ಲಾಸ್ಟಿಕ್‌ ಕವರ್‌ಗೆ ಪೆಟ್ರೋಲ್ ತುಂಬಿ, ಅದರ ಮೇಲೆ ಪಟಾಕಿ ಬಾಂಬ್ ಇಟ್ಟು ಬೆಂಕಿ ಹಚ್ಚಿದ್ದಾರೆ. ಪರಿಣಾಮ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಪೆಟ್ರೋಲ್ ಬಾಂಬ್ ಸ್ಪೋಟಗೊಂಡ ಅನತಿ ದೂರದಲ್ಲಿ ಪೆಟ್ರೋಲ್ ಟ್ಯಾಂಕರ್ ನಿಂತಿದ್ದು ಬಾರಿ ಅನಾಹುತವೊಂದು ತಪ್ಪಿದಂತಾಗಿದೆ.

Also Read  Breaking ಉಪ್ಪಿನಂಗಡಿ: ಕಾರು - ಟ್ಯಾಂಕರ್ ನಡುವೆ ಢಿಕ್ಕಿ ➤ ಒಂದೇ ಕುಟುಂಬದ ಇಬ್ಬರು ಮೃತ್ಯು, ಓರ್ವ ಗಂಭೀರ

 

error: Content is protected !!
Scroll to Top