ನ.25ರೊಳಗೆ ಬಗರ್ ಹುಕುಂ ಅರ್ಜಿ ತೆರವುಗೊಳಿಸುವಂತೆ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com . 14. ಬಗರ್ ಹುಕುಂ ಸಂಬಂಧಿತ ಅರ್ಜಿಗಳನ್ನು ನ.25ರೊಳಗೆ ತೆರವುಗೊಳಿಸಬೇಕು, ಆದೇಶ ಪಾಲನೆಯಾಗದಿದ್ದಲ್ಲಿ ಎಲ್ಲರಿಗೂ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಖಡಕ್ ಸೂಚನೆ ನೀಡಿದ್ದಾರೆ.

ಬಗರ್ ಹುಕುಂ ಬಡವರ ಕೆಲಸ. ಬಡ ರೈತರಿಗೆ ಶೀಘ್ರ ಭೂ ಮಂಜೂರು ಮಾಡಬೇಕು ಎಂದು ರೈತಪರ ಸಂಘಟನೆಗಳು ದಶಕಗಳಿಂದ ಹೋರಾಡುತ್ತಿವೆ. ಈ ಬಗ್ಗೆ ಸರ್ಕಾರಕ್ಕೂ ಬದ್ಧತೆ ಇದ್ದು, ರೈತ ಹೋರಾಟಗಾರರ ದ್ವನಿಗೆ ಕಿವಿಗೊಡುವ ಅವರ ಸಮಸ್ಯೆಯನ್ನು ಆಲಿಸಿ ಪರಿಹರಿಸುವ ಉತ್ತರದಾಯಿತ್ವ ನನ್ನ ಮೇಲೂ ಇದೆ ಎಂದು ಹೇಳಿದರು.

 

Scroll to Top