ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ಗೆ ಹೈಕೋರ್ಟ್‌ ತಡೆ

(ನ್ಯೂಸ್ ಕಡಬ) newskadaba.com . 14. ವಕ್ಫ್ ನೋಟಿಸ್ ನೀಡಿದ ಕಾರಣ ಹಾವೇರಿಯ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಸ್ಟ್ ಹಾಕಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ ನೀಡಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಎಫ್‌ಐಆರ್‌ಗೆ ಗುರುವಾರ (ನ.14) ತಡೆ ನೀಡಿದೆ. ಮೃತ ರೈತ ರುದ್ರಪ್ಪನ ಕುಟುಂಬಸ್ಥರು ಹುಬ್ಬಳ್ಳಿಯಲ್ಲಿ ವಕ್ಫ್ ಕಾಯಿದೆ ತಿದ್ದುಪಡಿ ಜಂಟಿ ಸದನ ಸಮಿತಿಗೆ ವಕ್ಫ್ ಬೋರ್ಡ್‌ನಿಂದ ಅನ್ಯಾಯ ಆಗಿರೋದಾಗಿ ದೂರು ನೀಡಿದ್ದರು. ಆದರೆ ವಕ್ಫ್ ಎಂದು ನಮೂದಾಗಿದ್ದಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಪೊಲೀಸರು ಹಾಗೂ ಜಿಲ್ಲಾಡಳಿತ ಈಗ ಸ್ಪಷ್ಟನೆ ನೀಡಿತ್ತು

Also Read  ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನಲೆ   ➤ ಖಾಸಗಿ ಬಸ್ ಟಿಕೆಟ್ ದರ ಏರಿಕೆ.!  

 

error: Content is protected !!
Scroll to Top