ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26 ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ.26 ಕ್ಕೆ ಮುಂದೂಡಿದೆ.

ಕೊಲೆ ಕೇಸ್‌ನಲ್ಲಿ ದರ್ಶನ್, ಪವಿತ್ರಾಗೌಡ ಸೇರಿ ಆರು ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಾಯಿತು. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ.ಈ ವೇಳೆ ದರ್ಶನ್ ಪರ ವಾದ ಮಂಡಿಸಿದ ಸಿ.ವಿ.ನಾಗೇಶ್, ಹೊಸದಾಗಿ ಮತ್ತೊಂದು ರಿಪೋರ್ಟ್ ನೀಡಿದರು. ಅಲ್ಲದೇ, ಶನಿವಾರಕ್ಕೆ ವಾದ ಮಂಡನೆಗೆ ಅವಕಾಶ ಕೋರಿದರು.

Also Read  ಕರಾವಳಿ ಜನರಿಗೆ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತಂದುಕೊಟ್ಟ ಸಚಿವರು➤ ದ.ಕ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕೊರೊನಾಗೆ ಉಚಿತ ಚಿಕಿತ್ಸೆ

error: Content is protected !!
Scroll to Top