ಮುಡಾ ಹಗರಣ ಪ್ರಕರಣ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, . 26. ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ನಿವೇಶನ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ.

ಇಂದು ಹೈಕೋರ್ಟ್‌ ತನಿಖಾ ವರದಿಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಪ್ರಕರಣದ ನಾಲ್ವರು ಪ್ರಮುಖ ಆರೋಪಿಗಳ ವಿಚಾರಣೆಯನ್ನು ಲೋಕಾಯುಕ್ತ ನಡೆಸಿದೆ. ಸಿದ್ದರಾಮಯ್ಯ, ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜು ವಿಚಾರಣೆ ಆಗಿದೆ. ಪ್ರಕರಣದಲ್ಲಿ ಅಧಿಕಾರಿಗಳಾದ ಕುಮಾರ್ ನಾಯ್ಕ್, ನಟೇಶ್ ಮತ್ತು ಪಾಲಾಯ್ಯ ವಿಚಾರಣೆ ಆಗಿದ್ದು, ಬಳಿಕ ಸಾಕ್ಷಿಗಳಿಂದ ಹೇಳಿಕೆಯನ್ನು ಕೂಡ ದಾಖಲಿಸಲಾಗಿದೆ ಎನ್ನಲಾಗಿದೆ.

 

Scroll to Top