ಮಾದಕ ದ್ರವ್ಯದ ದುಶ್ಚಟದಿಂದ ದೇಶ ಮುಕ್ತವಾಗಬೇಕು: ಯು.ಟಿ.ಖಾದರ್

(ನ್ಯೂಸ್ ಕಡಬ) newskadaba.com ಡಿ.30: ಉಳ್ಳಾಲ : ಮಾದಕ ದ್ರವ್ಯ ದುಶ್ಚಟದಿಂದ ದೇಶ ಮುಕ್ತವಾಗಬೇಕು. ಇದನ್ನು ನಿರ್ಮೂಲನೆ ಮಾಡುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣ ಮಾಡಬೇಕಾದ ಜವಾಬ್ದಾರಿ ನಮ್ಮದು. ಸಮಾಜವನ್ನು ಜೋಡಿಸುವ ಕೆಲಸ ನಮ್ಮಿಂದ ಆಗಬೇಕೇ ಹೊರತು ವಿಭಜಿಸುವ ಕೆಲಸ ಆಗಬಾರದು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು.

ಅವರು ನಾಟೆಕಲ್ ನಾಗರಿಕ ರಕ್ಷಣಾ ವೇದಿಕೆ ಇದರ ವಾರ್ಷಿಕೋತ್ಸವದ ಪ್ರಯುಕ್ತ ಮಾದಕದ್ರವ್ಯ ಮತ್ತು ಅಪರಾಧ ಚಟುವಟಿಕೆಗಳ ಕುರಿತು ನಾಟೆಕಲ್ ಜಂಕ್ಷನ್ ನಲ್ಲಿ ನಡೆದ ಜನ ಜಾಗೃತಿ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

Also Read  ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ

error: Content is protected !!
Scroll to Top